ರಾಯಚೂರು,ಜೂ.26 : ಜಿಲ್ಲೆಯ ಕರೇಗುಡ್ಡ ಗ್ರಾಮಕ್ಕೆ ಗ್ರಾಮ ವಾಸ್ತವ್ಯಕ್ಕೆ ಬಸ್ಸಿನಲ್ಲಿ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ನೂರಾರು ಕಾರ್ಮಿಕರು ಬಸ್ಸನ್ನು ತಡೆದು ಪ್ರತಿಭಟನೆ ಮಾಡಿದರು.
ಈ ವೇಳೆ ಕುಮಾರಸ್ವಾಮಿ ಅವರ ಮೇಲೆ ಗರಂ ಆಗಿದ ಸಿಎಂ ಮೋದಿಗೆ ವೋಟ್ ಹಾಕಿ ನನ್ನ ಮುಂದೆ ಬಂದು ಪ್ರತಿಭಟನೆ ಮಾಡುತ್ತೀರಾ? ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರತಿಭಟನಾಕಾರರ ವಿರುದ್ಧ ಗರಂ ಆದ್ದರು. ವೈಟಿಪಿಎಸ್ ವಲಯದ ಬಾಕಿ ವೇತನ ಮತ್ತು ಕೈಬಿಟ್ಟ ಕಾರ್ಮಿರನ್ನು ಕೆಲಸಕ್ಕೆ ಪಡೆಯುವಂತೆ ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ ಮತ ಹಾಕುವುದು ಮೋದಿಗೆ ಸಮಸ್ಯೆಗಳನ್ನು ನನ್ನ ಹತ್ತಿರ ಕೇಳ್ತಿರಾ, ಅವರಿಗೆ ಹೋಗಿ ನಿಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಿ. ನೀವು ಹೀಗೆ ಪ್ರತಿಭಟನೆ ಮಾಡುತ್ತಿದ್ದರೆ ಲಾಠಿ ಚಾರ್ಜ್ ಮಾಡಿಸುತ್ತೇನೆ ಎಂದು ಗರಂ ಆಗಿದ್ದಾರೆ. ಜಿಲ್ಲೆಯ ಉಸ್ತುವಾರಿ ಸಚಿವ ನಾಡ ಗೌಡರು ಮುಖ್ಯಮಂತ್ರಿಯನ್ನು ಮನವೊಲಿಸಿದ್ದಾರೆ.