ಬಿಜೆಪಿಗೆ ಟಾಂಗ್ ಕೊಟ್ಟ ಸಿಎಂ

ಬಿಜೆಪಿಗೆ ಟಾಂಗ್ ಕೊಟ್ಟ ಸಿಎಂ

ಮೈಸೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾವು ಐದು ಗ್ಯಾರಂಟಿ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದರು. ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನೀಡಿದ ಐದು ಗ್ಯಾರಂಟಿಗಳಲ್ಲಿ ಮೂರು ಗ್ಯಾರಂಟಿಗಳನ್ನು ಈಗಾಗಲೇ ಜಾರಿಗೆ ತಂದಿದೆ. ಇಂದು 4ನೇ ಗ್ಯಾರಂಟಿ ಆದ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಜಾರಿಗೆ ನೀಡಲಾಗುತ್ತಿದೆ.
ಈ ಮಧ್ಯ ನಮಗೆ ಇದೇನು ಸವಾಲು ಅನಿಸಲಿಲ್ಲ. ಗ್ಯಾರಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇದೆ. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರಂಟಿಗಳ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
ಖುದ್ದು ಪ್ರಧಾನಿ ಮೋದಿ ಕೂಡ ಗ್ಯಾರಂಟಿ ಯೋಜನೆಗಳ ಕುರಿತು ಆರೋಪ ಮಾಡುತ್ತಿದ್ದರು. ಆದರೆ, ಅವರು ಹೇಳಿದಂತೆ ರಾಜ್ಯ ಸರ್ಕಾರವೇನು ದಿವಾಳಿ ಆಗಿಲ್ಲ. ಮಾತು ಕೊಟ್ಟಂತೆ ಗ್ಯಾರಂಟಿಗಳ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದರು. ಗೃಹಲಕ್ಷ್ಮಿಗೆ ವಾರ್ಷಿಕ. 32 ಸಾವಿರ ಕೋಟಿ ಖರ್ಚಾಗುತ್ತದೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆಗೆ ಇಷ್ಟುದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದರು.

ಫ್ರೆಶ್ ನ್ಯೂಸ್

Latest Posts

Featured Videos