ಸಿಎಂ ಯಶಸ್ಸು, ಶ್ರೇಯಸ್ಸಿಗಾಗಿ ಇಂದು ವಿಶೇಷ ಪೂಜೆ

ಸಿಎಂ ಯಶಸ್ಸು, ಶ್ರೇಯಸ್ಸಿಗಾಗಿ ಇಂದು ವಿಶೇಷ ಪೂಜೆ

ಚಿಕ್ಕಮಗಳೂರು, ಮೇ.3, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಪ್ರಕೃತಿ ಚಿಕಿತ್ಸೆ ಬಳಿಕ ಹೋಮ-ಹವನದಲ್ಲಿ ಪಾಲ್ಗೊಳ್ಳಲಿದ್ದಾರೆ. ಕುಮಾರಸ್ವಾಮಿ ಅವರು ಅಮಾವಾಸ್ಯೆ ದಿನದಂದೇ ವಿಶೇಷ ಪೂಜೆ ನಡೆಸಲಿದ್ದಾರೆ.

ಕುಮಾರಸ್ವಾಮಿ ಉಡುಪಿಯಿಂದ ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಸಂಜೆ ಕೊಪ್ಪಾದ ಕಮ್ಮರಡಿ ಬಳಿಯ ಕುಡ್ನಳ್ಳಿದಲ್ಲಿರುವ ಉಮಾಮಹೇಶ್ವರಿ ದೇವಾಲಯದಲ್ಲಿ ನಡೆಯಲಿರೋ ಹೋಮ-ಹವನ, ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶತ್ರು ಸಂಹಾರ, ಯಶಸ್ಸು ಹಾಗೂ ಶ್ರೇಯಸ್ಸಿಗಾಗಿ ಸಿಎಂ ಈ ಪೂಜೆ ಮಾಡುತ್ತಿದ್ದಾರೆ.

ಮುಖ್ಯಮಂತ್ರಿ ಕುಟುಂಬ ರುದ್ರಹೋಮ ಹಾಗೂ ಗಣಪತಿ ಹೋಮ ನಡೆಸಲಿದ್ದಾರೆ. ನಂತರ ನಾಳೆ ಬೆಳಗ್ಗೆ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos