ರಾಗಿ ಹೆಲ್ತ್ ಮಿಕ್ಸ್ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ರಾಗಿ ಹೆಲ್ತ್ ಮಿಕ್ಸ್ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಸರ್ಕಾರಿ ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆ ಜಾರಿಯಲ್ಲಿದ್ದು, ವಾರದಲ್ಲಿ ಮೂರು ಬಾರಿ ಹಾಲು ಕೊಡಲಾಗುತ್ತದೆ. ಇನ್ನು ಈ ಹಾಲಿಗೆ ರಾಗಿ ಮಾಲ್ಟ್ ಪೌಡರ್ ಹಾಕಿ ಕೊಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದರು.

ರಾಜ್ಯ ಸರ್ಕಾರಿ ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಹೆಲ್ತ್ ಮಿಕ್ಸ್ ವಿತರಿಸಲಾಗುವುದು. ಅಪೌಷ್ಟಿಕತೆ ನಿವಾರಣೆ ಉದ್ದೇಶದಿಂದ ವಿತರಿಸಲಾಗುತ್ತಿರುವ ಬಿಸಿ ಹಾಲಿನೊಂದಿಗೆ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಉಚಿತವಾಗಿ ನೀಡುತ್ತಿರುವ ಸಾಯಿ ಶ್ಯೂ ರಾಗಿ ಹೆಲ್ತ್ ಮಿಕ್ಸ್ ನೀಡಲಾಗುತ್ತಿದೆ.

ರಾಜ್ಯದ 1 ರಿಂದ  10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು. ರಾಗಿ ಹೆಲ್ತ್ ಮಿಕ್ಸ್ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ಈ ಮೂಲಕ ವಾರದಲ್ಲಿ ಮೂರು ದಿನ ಮಕ್ಕಳಿಗೆ ರಾಕಿ ಮಾಲ್ಟ್‌ ನೀಡಲಾಗುತ್ತದೆ.

ಸರ್ಕಾರಿ ಶಾಲೆಗಳ ಒಂದರಿಂದ ಅನುದಾನಿತ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಾಗಿ ಮಿಕ್ಸ್ ನೀಡುವ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.  ವಾರದಲ್ಲಿ ಮೂರು ದಿನ ಕ್ಷೀರ ಭಾಗ್ಯ ಯೋಜನೆ ಬಿಸಿ ಹಾಲಿನಲ್ಲಿ ಮಿಶ್ರಣ ಮಾಡಿ ಕುದಿಸಿ ರಾಗಿ ಹೆಲ್ತ್ ಮಿಸ್ ಮಕ್ಕಳಿಗೆ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

 

 

ಫ್ರೆಶ್ ನ್ಯೂಸ್

Latest Posts

Featured Videos