ಸಿಎಂ ಮೇಲೆ ಬಿಜೆಪಿ ಆಕ್ರೋಶ!?

ಸಿಎಂ ಮೇಲೆ ಬಿಜೆಪಿ ಆಕ್ರೋಶ!?

ರಾಯಚೂರು, ಜೂ. 26: ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೇಗುಡ್ಡಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ವೈಟಿಪಿಎಸ್ ಸಿಬ್ಬಂದಿಗಳು ಸಿಎಂ ಬಸ್ ಅನ್ನು ತಡೆದು ಮನವಿ ಸಲ್ಲಿಸಿದ್ದರು. ಬಳಿಕ ತಡೆಮಧ್ಯೆ ಪ್ರತಿಭಟನೆ ಕುಳಿತಾಗ ತಾಳ್ಮೆ ಕಳೆದುಕೊಂಡ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದರು.

ವೈಟಿಪಿಎಸ್ ಸಿಬ್ಬಂದಿಯ ಅಹವಾಲು ಸ್ವೀಕಾರದ ವೇಳೆ ಬಸ್ ಅನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಕ್ಕೆ ತಾಳ್ಮೆ ಕಳೆದುಕೊಂಡ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವೋಟ್ ಮೋದಿಗೆ ಹಾಕ್ತೀರಾ? ಕೆಲಸ ಮಾಡಲಿಕ್ಕೆ ನಾನ್ ಬೇಕಾ? ಎಂಬ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

ಇದೆಲ್ಲಾ ಸರ್ವಾಧಿಕಾರಿ ಆಡಳಿತ ನಡೆಸುವಂತಿದೆ. ಇದನ್ನೆಲ್ಲಾ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅನುಭವಿಸಬೇಕಾಗುತ್ತದೆ. ಸಿಎಂ ಕುಮಾರಸ್ವಾಮಿ ಸಂಯಮ ಕಳೆದುಕೊಳ್ಳುತ್ತಿದ್ದಾರೆ. ಪ್ರತಿಭಟನೆ ಮಾಡುವವರನ್ನು ತಡೆಯುವುದು ಒಳ್ಳೆಯದಲ್ಲ. ನಿಮ್ಮ ಯೋಗ್ಯತೆ ಏನೆಂದು ರಾಜ್ಯದ ಜನ ತೀರ್ಮಾನಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಹೇಳಿಕೆ ಅತಿರೇಕದ ಪರವಾವಧಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ಹೇಗೆ ನಡೆದುಕೊಳ್ಳಬೇಕೆಂಬ ಗೊತ್ತಿಲ್ಲ. ಇಂತಹ ದುರಹಂಕಾರದ ಪ್ರವೃತ್ತಿಯನ್ನು ಸಿಎಂ ನಿಲ್ಲಿಸಬೇಕು. ಈ ಪ್ರವೃತ್ತಿಯನ್ನು ಖಂಡಿಸುತ್ತೇನೆ ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos