ಬೆಂಗಳೂರು, ಸೆ. 11: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಗೌರವ ಅರ್ಪಿಸಿದರು.ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಸಂದೀಪ್ ದವೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನಟಿ ಶ್ರೀಧರ್ ಉಪಸ್ಥಿತರಿದ್ದರು.