ಬೆಂಗಳೂರು, ಆ. 8: ಮುಖ್ಯಮಂತ್ರಿ ಯಡಿಯೂರಪ್ಪಗೆ ದೂರವಾಣಿ ಕರೆ ಮಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್. ಪ್ರವಾಹ ಪರಿಸ್ಥಿತಿ ನಿರ್ವಹಣೆ ಗೆ ಅಗತ್ಯ ನೆರವು ನೀಡುವ ಭರವಸೆ. ಸೇನಾ ಹೆಲಿಕಾಪ್ಟರ್ ಹಾಗೂ ಅಗತ್ಯ ಕೇಂದ್ರ ರಕ್ಷಣಾ ತಂಡಗಳನ್ನು ರಾಜ್ಯಕ್ಕೆ ಇಂದು ಸಂಜೆಯೊಳಗೆ ಕಳುಹಿಸುವುದಾಗಿ ಭರವಸೆ. ಸೇನೆಯ ಹತ್ತು ಹೆಲಿಕಾಪ್ಟರ್ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ಗೆ ಕಳುಹಿಸಲು ನಿರ್ಧಾರ.