ಬೆಂಗಳೂರು,ಡಿ. 18 : ದಿ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರದ ಕುರಿತು ಇಂದು ಅವರ ಪತ್ನಿ ಭಾರತಿ ವಿಷ್ಣುವರ್ಧನ್ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಭಾರತಿ ಹಾಗೂ ಅಳಿಯ ಅನಿರುದ್ಧ್ ಕೆಲ ಕಾಲ ಬಿಎಸ್ವೈ ಜೊತೆ ಚರ್ಚೆ ನಡೆಸಿದರು. ಭೇಟಿ ನಂತರ ಮಾಧ್ಯಮಗಳ ಜೊತೆ ಭಾರತಿ ವಿಷ್ಣುವರ್ಧನ್ ಮಾತನಾಡಿದರು. “30ರಂದು ವಿಷ್ಣುವರ್ಧನ್ ಪುಣ್ಯಸ್ಮರಣೆ ಇದೆ. ಇದರ ಬಗ್ಗೆ ಕೇಳಿಕೊಂಡಿದ್ದೆವು. ಮೂರ್ನಾಲ್ಕು ದಿನಗಳಲ್ಲಿ ಸ್ಮಾರಕಕ್ಕೆ ಅಡಿಪಾಯ ಕಾರ್ಯ ಆರಂಭಿಸುವ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ,” ಎಂದರು ಭಾರತಿ.