ದೇವೇಗೌಡರಿಗೆ ಟಾಂಗ್‌ ನೀಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರಿಗೆ ಟಾಂಗ್‌ ನೀಡಿದ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಬಿಸಿ ಹೆಚ್ಚಾಗಿದ್ದು, ವಿಪಕ್ಷ ನಾಯಕರ ವಿರುದ್ದ ತೀವ್ರ ವಾಗ್ದಾಳಿ  ನಡೆಸುತ್ತಿದ್ದಾರೆ. ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಪ್ರಶ್ನಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿ ಆಗಿಲ್ವಾ..? ಗೌಡರೇನು ಪಿಎಂ ಅಭ್ಯರ್ಥಿ ಎಂದು ಬಿಂಬಿತರಾಗಿದ್ದರಾ..? ದೇವೇಗೌಡರನ್ನ ಪಿಎಂ ಮಾಡಿದ್ದು ಕಾಂಗ್ರೆಸ್. ಎಂದು ಟಾಂಗ್ ಕೊಟ್ಟರು.

ಬಿಜೆಪಿಯ ಚಿಪ್ಪು ಜಾಹೀರಾತುಗೆ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ,  ಮಹಿಳೆಯರಿಗೆ 2 ಸಾವಿರ ರೂ ಕೊಡ್ತೀರೋದು ಚಿಪ್ಪಾ.. ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಓಡಾಡುತ್ತಿರೋದು ಚಿಪ್ಪಾ..  5 ಕೆಜಿ ಅಕ್ಕಿ ಜಾಸ್ತಿ ಕೊಡ್ತೀರೋದು ಚಿಪ್ಪಾ.. ನಾವು ಕೊಟ್ಟಿದ್ರೆ  ಚಿಪ್ಪು ಹಾಗಾದ್ರೆ ಬಿಜೆಪಿಯವರು ಏನು ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos