ಯತೀಂದ್ರ ಹೇಳಿಕೆ ಸಮರ್ಥಿಸಿಕೊಂಡ ಸಿಎಂ‌ ಸಿದ್ದರಾಮಯ್ಯ

ಯತೀಂದ್ರ ಹೇಳಿಕೆ ಸಮರ್ಥಿಸಿಕೊಂಡ ಸಿಎಂ‌ ಸಿದ್ದರಾಮಯ್ಯ

ಮೈಸೂರು: ಕೇಂದ್ರ ಗೃಹಸಚಿವರ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಯತೀಂದ್ರ ಸಿದ್ದರಾಮಯ್ಯರವರಿಗೆ ಸಂಸ್ಕಾರದ ಪಾಠವನ್ನು ಬಿಜೆಪಿಗೆ ವ್ಯಂಗ ಮಾಡಿದರು.

ಮೈಸೂರಿನಲ್ಲಿ ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಮಿತ್ ಶಾ ಗೂಂಡಾ ಎಂಬ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಸಿಎಂ‌ ಸಿದ್ದರಾಮಯ್ಯ, ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿದೆ, ಸಿಬಿಐ ಹೇಳಿರುವುದನ್ನ ಯತೀಂದ್ರ ಹೇಳಿದ್ದಾನೆ. ಅದು ಅವನು ಬಳಸಿರುವ ಪದ ಅಲ್ಲ, ಸಿಬಿಐ ವರದಿಯಲ್ಲಿರುವ ಪದ, ಅದನ್ನೇ ಅವನು ಉಲ್ಲೇಖಿಸಿದ್ದಾನೆ. ಬಿಜೆಪಿಗೆ ಸಂಸ್ಕಾರವೇ ಗೊತ್ತಿಲ್ಲ, ಅವರು ಯತೀಂದ್ರಗೆ ಸಂಸ್ಕಾರ ಹೇಳಿಕೊಡಲು ಬಂದಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷಕ್ಕೆ ಅನೇಕರು ಬರುತ್ತಾರೆ,  ಪಕ್ಷದ ಸಿದ್ಧಾಂತ, ನಾಯಕತ್ವ ಒಪ್ಪಿ ಯಾರೇ ಬಂದರೂ ಸ್ವಾಗತ. ಮೈಸೂರು ಚಾಮರಾಜನಗರ ಎರೆಡು ಕ್ಷೇತ್ರವನ್ನ ಗೆದ್ದೆ ಗೆಲ್ಲುತ್ತೇವೆ, ಮೈಸೂರು ಮಾತ್ರವೇ ನನಗೆ ಮುಖ್ಯವಲ್ಲ, ಎಲ್ಲಾ ಕ್ಷೇತ್ರಗಳು ಬಹಳ ಮುಖ್ಯ, ಎಲ್ಲಾ ಕ್ಷೇತ್ರಗಳಿಗೆ ಸಾಧ್ಯವಾದಷ್ಟು ಹೋಗುತ್ತೇನೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos