ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿರುವಂತೆ ಕಾಣುತ್ತಿದೆ. ರಾಜಕೀಯ ಕಾರಣಕ್ಕೆ 6 ವರ್ಷಗಳಿಂದ ಇದ್ದ ಮುನಿಸನ್ನು ಮರೆತು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.

ಮೈಸೂರಿನ ಜಯಲಕ್ಷ್ಮಿ ಪುರಂ ನಿವಾಸದಲ್ಲಿರುವ ಸಂಸದ ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ‌ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಶ್ರೀನಿವಾಸ್ ಪ್ರಸಾದ್ ಹಲವು ವರ್ಷಗಳಿಂದ ಸಿದ್ದರಾಮಯ್ಯರಿಂದ ದೂರ ಉಳಿದಿದ್ದರು. ಇದೀಗ ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

ಭೇಟಿ ವೇಳೆ ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಆರೋಗ್ಯ ವಿಚಾರಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆ ಉಭಯ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ. ಶ್ರೀನಿವಾಸ್ ಪ್ರಸಾದ್ ಮನೆಗೆ ನಾನು ಹೋಗಲ್ಲ ಅಂತ ಸಿಎಂ ಸಿದ್ದರಾಮಯ್ಯ ವಾರದ ಹಿಂದೆ ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಒಂದೇ ವಾರದಲ್ಲಿ ನಿಲುವು ಬದಲಾಯಿಸಿಕೊಂಡಿದ್ದಾರೆ. ಶ್ರೀನಿವಾಸ್ ಪ್ರಸಾದ್ ಮನೆಗೆ ಹೋಗದಿದ್ದರೆ ದುಬಾರಿ ಬೆಲೆ ತೆತ್ತಬೇಕಾಗುತ್ತೆ ಎಂಬ ಸುಳಿವು ಸಿಕ್ಕಿದ್ದೆ ತಡ ಪ್ರಸಾದ್ ನಿವಾಸಕ್ಕೆ  ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos