ರಾಜಕೀಯಕ್ಕೆ ನಿವೃತ್ತಿ ಹೇಳಿದ ಸಿಎಂ ಸಿದ್ದು!

ರಾಜಕೀಯಕ್ಕೆ ನಿವೃತ್ತಿ ಹೇಳಿದ ಸಿಎಂ ಸಿದ್ದು!

ಮೈಸೂರು: ಲೋಕಸಭಾ ಚುನಾವಣೆ ರಾಜ್ಯದಲ್ಲೇ ಬಿಸಿ ಹೆಚ್ಚಾಗಿದ್ದು ಅಭ್ಯರ್ಥಿಗಳ ಪರ ಮತಯಾಚಿಸಲು ಪಕ್ಷದ ನಾಯಕರು ಮುಂದಾಗಿದ್ದಾರೆ. ಮೈಸೂರಿನ ಲೋಕಸಭಾ ಚುನಾವಣೆಯಲ್ಲಿ ಲಕ್ಷ್ಮಣ್ ಅವರನ್ನು ಗೆಲ್ಲಿಸುವುದಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಪಣತೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಎಂದರೆ ಇಡೀ ರಾಜ್ಯದಲ್ಲೇ ಒಂದು ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇಡಿ ದೇಶದಲ್ಲಿ ರಾಜಕಾರಣಿ ಯಾರು ಪಡೆಯದಂತಹ ಜನಬೆಂಬಲವನ್ನು ಸಿಎಂ ಸಿದ್ದರಾಮಯ್ಯನವರು ಪಡೆದಿದ್ದಾರೆ.

ಚುನಾವಣಾ ರಾಜಕೀಯ ನಿವೃತ್ತಿ ಕುರಿತು ತವರು ಕ್ಷೇತ್ರದಲ್ಲಿಯೇ ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ನಿರ್ಧಾರ ಅವರ ಅಭಿಮಾನಿಗಳಲ್ಲಿ ಆಘಾತ ನೀಡಿದೆ.

ಜಿಲ್ಲೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ನನಗೆ ವಯಸ್ಸಾಗುತ್ತಿದೆ. ಮುಂದಿನ ನಾಲ್ಕು ವರ್ಷದ ಬಳಿಕ ವಿಧಾನಸಭಾ ಚುನಾವಣೆ ಎದುರಾಗುತ್ತದೆ. ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದೇನೆ ಎಂದು ಅವರು ತಿಳಿಸಿದರು. ಜೊತೆಗೆ ಈ ನಿರ್ಧಾರಕ್ಕೆ ಕಾರಣಗಳೇನು ಎಂಬುದನ್ನು ಸ್ವತಃ ಸಿದ್ದರಾಮಯ್ಯ ಅವರೇ ವಿವರಿಸಿದ್ದಾರೆ.

ಅವರವರ ದೇಹಸ್ಥಿತಿ, ಆರೋಗ್ಯದ ಬಗ್ಗೆ ಅವರಿಗೇ ಗೊತ್ತಿರುತ್ತದೆ. ನನಗೆ ಮೊದಲಿನಂತೆ ಉತ್ಸಾಹ ಭರಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ನನಗೆ ಯಾವ ಆತಂಕ ಇಲ್ಲ. ಆತಂಕ ಇದ್ದರೆ ಮಾತ್ರ ಟೆನ್ಷನ್ ಇರುತ್ತದೆ. ನನಗೆ ಆ ರೀತಿ ಏನು ಇಲ್ಲ. ಹೀಗಾಗಿ ನಾನು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos