ಸಿಎಂಗೆ ಪ್ರಶ್ನೆ ಕೇಳಿದ ಸಿದ್ದು

ಸಿಎಂಗೆ ಪ್ರಶ್ನೆ ಕೇಳಿದ ಸಿದ್ದು

ಬೆಂಗಳೂರು, ಜ. 8 : ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ನೀವು ರೂ.38 ಸಾವಿರ ಕೋಟಿ ಪರಿಹಾರ ಕೇಳಿದ್ದು ಆಗಸ್ಟ್ ತಿಂಗಳ ನೆರೆ ಹಾವಳಿಗೆ. ಅಕ್ಟೋಬರ್ ತಿಂಗಳ ಅತಿವೃಷ್ಟಿಯ ನಷ್ಟದ ಸಮೀಕ್ಷೆಯೇ ಪೂರ್ಣಗೊಂಡಿಲ್ಲ. ತಕ್ಷಣ ಅದನ್ನು ಮುಗಿಸಿ ಕೇಂದ್ರಕ್ಕೆ ಹೆಚ್ಚುವರಿ ಪರಿಹಾರದ ಬೇಡಿಕೆ ಸಲ್ಲಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರ ನೀಡಿರುವ ರೂ.669.85 ಕೋಟಿ ಹೆಚ್ಚುವರಿ ನೆರೆ ಪರಿಹಾರ ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ. ಯಡಿಯೂರಪ್ಪ ಅವರೇ, ನೆನಪಿರಲಿ ನೀವೇ ಒಪ್ಪಿಕೊಂಡಂತೆ ಅಂದಾಜು ನಷ್ಟ ರೂ. 50 ಸಾವಿರ ಕೋಟಿ, ನೀವು ಕೇಳಿದ್ದು ರೂ.38 ಸಾವಿರ ಕೋಟಿ. ನಿಮ್ಮ ಗೋಗರೆತಕ್ಕೆ ಸಿಕ್ಕಿದ್ದು ಕೇವಲ ರೂ.1869 ಕೋಟಿ. ಇಷ್ಟು ಸಾಕಾ? ಎಂದು ಪ್ರಶ್ನೆ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಗೋಗರೆತಕ್ಕೆ ಕರಗಿದ ನರೇಂದ್ರ ಮೋದಿಯವರು ರೂ.669.85 ಕೋಟಿ ಹೆಚ್ಚುವರಿ ನೆರೆಪರಿಹಾರ ದಯಪಾಲಿಸಿದ್ದು, ಒಟ್ಟು ಪರಿಹಾರ ರೂ.1869.85 ಆಗುತ್ತೆ. ಸುಳ್ಳು ದೇವರ ಭಕ್ತರಾದ ಬಿಜೆಪಿ ನಾಯಕರು ಪರಿಹಾರದ ಮೊತ್ತ 1200+1869.85=ರೂ.3069 ಕೋಟಿ ಎಂದು ಹೇಳಿ ಸಂಭ್ರಮಿಸುತ್ತಿರುವುದು ತಮಾಷೆಯಾಗಿದೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos