ಸಿಎಂ ಇಂದಿನಿಂದ ಬರಪೀಡಿತ ಜಿಲ್ಲೆಗಳ ಪ್ರವಾಸ

ಸಿಎಂ ಇಂದಿನಿಂದ ಬರಪೀಡಿತ ಜಿಲ್ಲೆಗಳ ಪ್ರವಾಸ

ಬೆಂಗಳೂರು, ಸೆ. 28: ರಾಜ್ಯದ ಮುಖ್ಯಮಂತ್ರಿಯಾಗಿರುವ ಬಿ.ಎಸ್. ಯಡಿಯೂರಪ್ಪ ಅವರು, ಇಂದಿನಿಂದ ರಾಜ್ಯದ ಬರಪೀಡಿತ ಜಿಲ್ಲೆಗಳಿಗೆ ಪ್ರವಾಸ ಆರಂಭಿಸಿದ್ದಾರೆ. ತುಮಕೂರು, ಮೈಸೂರು, ಶಿವಮೊಗ್ಗ ಸೇರಿ ಬರಪೀಡಿತ ಜಿಲ್ಲೆಗಳಿಗೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಇಂದು ತುಮಕೂರು ಜಿಲ್ಲೆಯಿಂದ ಪ್ರವಾಸ ಆರಂಭವಾಗಲಿದ್ದು, ರಸ್ತೆ ಮಾರ್ಗದ ಮೂಲಕ ತಿಪಟೂರಿಗೆ ತೆರಳಿ ಅಲ್ಲಿ ಹೊನ್ನಾಂಬಿಕೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬರ ಪರಿಸ್ಥಿತಿ ಆರಂಭಿಸಲಿದ್ದಾರೆ. ಬಳಿಕ ಮೈಸೂರಿಗೆ ತೆರಳಲಿದ್ದಾರೆ.

ಇಂದಿನಿಂದಲೇ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ ಬಿಎಸ್ ವೈ, ಮರುದಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ಅಲ್ಲಿಂದ ತವರು ಶಿವಮೊಗ್ಗ ಜಿಲ್ಲೆಗೆ ತೆರಳಲಿದ್ದಾರೆ ಎಂದು ವರದಿ ತಿಳಿದು ಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos