ಸಿಎಂ ಗ್ರಾಮ ವಾಸ್ತವ್ಯ ಮಾಡುವುದರಲ್ಲಿ ಅರ್ಥವಿಲ್ಲ- ಯಡ್ಡಿಯೂರಪ್ಪ

ಸಿಎಂ ಗ್ರಾಮ ವಾಸ್ತವ್ಯ ಮಾಡುವುದರಲ್ಲಿ ಅರ್ಥವಿಲ್ಲ- ಯಡ್ಡಿಯೂರಪ್ಪ

ಹುಬ್ಬಳ್ಳಿ , ಜೂನ್. 7, ನ್ಯೂಸ್ ಎಕ್ಸ್ ಪ್ರೆಸ್  :  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬರಗಾಲ ಅಧ್ಯಯನ ಮಾಡುವುದು ಬಿಟ್ಟು ಗ್ರಾಮ ವಾಸ್ತವ್ಯ ಮಾಡುವುದರಲ್ಲಿ ಅರ್ಥವಿಲ್ಲ. ಇದು ಜನರ ಗಮನ ಬೇರೆಡೆ ಸೆಳೆಯುವ ಕುತಂತ್ರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬರಗಾಲ ಪೀಡಿತ ಪ್ರದೇಶಗಳಿಗೆ ತೆರಳಿ ಅಲ್ಲಿನ ಜನರ, ರೈತರ, ಜಾನುವಾರುಗಳ ಸ್ಥಿತಿಗತಿ ಅರಿಯಬೇಕು. ಶಾಲೆಯಲ್ಲಿ ವಾಸ್ತವ್ಯ ಮಾಡಿದರೆ ಏನು ಪ್ರಯೋಜನ. ಇದು ಜನರ ಗಮನ ಬೇರೆಡೆ ಸೆಳೆಯಲು ಮಾಡುತ್ತಿರುವ ರಾಜಕೀಯ ದೊಂಬರಾಟ. ರೈತರ ಸಾಲ ಮನ್ನಾ ಮಾಡಲಿಲ್ಲ. ರಾಜಕೀಯ ಕಚ್ಚಾಟದಲ್ಲಿಯೇ ತೊಡಗಿದ್ದಾರೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos