ಬೆಂಗಳೂರು, ಜೂ.26: ಯಾದಗಿರಿ ಜಿಲ್ಲೆಯ ಚಂಡರಕಿ ಮೂಲಕ 2ನೇ ಹಂತದ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಗ್ರಾಮಸ್ಥರ ಕುಂದು-ಕೊರತೆ ಆಲಿಸಿ, ರಾತ್ರಿ ಶಾಲೆಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಮುಖ್ಯಮಂತ್ರಿಗಳ ಸ್ವಾಗತಕ್ಕೆ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಂಗಳವಾರ ರಾತ್ರಿ 8.45ಕ್ಕೆ ಬೆಂಗಳೂರಿನಿಂದ ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಹೊರಟಿರುವ ಮುಖ್ಯಮಂತ್ರಿ ಬುಧವಾರ ಬೆಳಗ್ಗೆ 5.18ಕ್ಕೆ ರಾಯಚೂರಿಗೆ ಆಗಮಿಸಲಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಕೆಲಕಾಲ ವಿಶ್ರಾಂತಿ ಪಡೆದು, ಬೆಳಗ್ಗೆ ೮ಕ್ಕೆ ವಿಶೇಷ ಸಾರಿಗೆ ಬಸ್ ಮೂಲಕ ಮಾನ್ವಿ ತಾಲೂಕಿನ ಕರೇಗುಡ್ಡಕ್ಕೆ ತೆರಳಲಿದ್ದಾರೆ. ಅಲ್ಲಿ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಜನತಾದರ್ಶನ ನಡೆಸಲಿದ್ದಾರೆ