ಮೈಸೂರು, ನ. 27 : ಸಿಎಂ ಯಡಿಯೂರಪ್ಪ ವಿಧಾನಸಭೆ ಉಪಚುನಾವಣೆಯನ್ನು ಹಣಬಲದಿಂದ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗಂಭೀರ ಆರೋಪ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಳಿ ಸರ್ಕಾರವಿದೆ, ಅವರನ್ನು ಯಾರೂ ಕೇಳುವವರಿಲ್ಲ. ಹೀಗಾಗಿ 15 ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಹೇಳಿದ್ದಾರೆ.ಎಷ್ಟೇ ಹಣ ಸಾಗಿಸಿದರೂ ಕೇಳುವವರು ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರನ್ನು ಹೊಗಳುತ್ತಿರುವುದರ ಹಿಂದೆ ಮತಗಳಿಕೆಯ ಉದ್ದೇಶವಿದೆ.