ಉಡುಪಿ, ಡಿ. 20: ನೆನ್ನೆ ಮುಂಜಾನೆ 5 ಘಂಟಯ ಸುಮಾರಿಗೆ ಉಡುಪಿ ಪೇಜಾವರ ಮಠದ ಮಠಾಧೀಶ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯ ಸ್ಥಿತಿ ಗಂಭಿರವಾಗಿತ್ತು. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.
ಕಫ ಹಾಗೂ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಅವರು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವು ದಿನಗಳಿಂದ ಪೇಜಾವರ ಶ್ರೀಗಳಿಗೆ ಆಗಾಗ ಅನಾರೋಗ್ಯ ಕಾಡುತ್ತಿತ್ತು. ನಿನ್ನೆ ಬೆಳಗ್ಗೆ 3 ಗಂಟೆಗೆ ಉಸಿರಾಟದ ಸಮಸ್ಯೆ ಹೆಚ್ಚಾದ್ದರಿಂದ ಕೂಡಲೇ ಅವರನ್ನು ಮಣಿಪಾಲಕ್ಕೆ ಕರೆದೊಯ್ಯಲಾಯಿತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀಗಳ ಸ್ಥಿತಿ ಚಿಂತಾಜನಕವಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.