ಬೆಂಗಳೂರು, ಜ. 31: ಸದ್ಯ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ. ಯಾರಿಗೆ ಮಂತ್ರಿಗಿರಿಯ ಅವಕಾಶ ಸಿಗುತ್ತೆ ಅನ್ನೋದು ಸದ್ಯಕ್ಕೆ ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿರೋ ವಿಚಾರ. ಅಚ್ಚರಿಯ ಆಯ್ಕೆಯಲ್ಲಿ ಇದೀಗ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಸಂಪುಟ ಸೇರ್ತಾರಾ ಎಂಬ ಪ್ರಶ್ನೆ ಮೂಡಿದೆ.
ಸಂಪುಟ ವಿಸ್ತರಣೆ ವಿಚಾರವಾಗಿ ನಿನ್ನೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ಅವರಿಗೂ ಮೊದಲೇ ದೆಹಲಿಯಲ್ಲಿ ಸಿ.ಪಿ. ಯೋಗೇಶ್ವರ್ ಬೀಡುಬಿಟ್ಟಿದ್ದಾರೆ. ಇವರಿಗೆ ಜೆಡಿಎಸ್ ಉಚ್ಛಾಟಿತ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಸಾಥ್ ಕೊಟ್ಟಿದ್ದಾರೆ.