ಶಿವಮೊಗ್ಗ: ಕುಗ್ರಾಮದಲ್ಲಿದ್ದರೂ, ನಮ್ಮದೊಂದು ಮಾದರಿ ಶಾಲೆ. ರಾಜ್ಯದ ಎಲ್ಲೆಡೆ ಇದನ್ನು ಅಳವಡಿಸಬೇಕು. ಈ ಕಾರಣಕ್ಕೆ ನೀವು ಇಲ್ಲಿಗೆ ಬಂದು ವಾಸ್ತವ್ಯ ಮಾಡಬೇಕು’ ಹೀಗೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿ ಗುಡ್ಡೇಕೇರಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಶ್ವೀಜಾ. ಸಿಎಂ ವಾಸ್ತವ್ಯ ಮಾಡುವುದಾಗಿ ಬಾಲಕಿಗೆ ಭರವಸೆ ನೀಡಿದ್ದಾರೆ.
ಮಲೆನಾಡಿನಲ್ಲಿ ಮಳೆಗಾಲದಲ್ಲಿ ಸೇತುವೆ ಇಲ್ಲದೆ ಸಂಕದ ಮೇಲೆ ಸಂಚರಿಸುವ ಅನಿವಾರ್ಯತೆಯಲ್ಲಿ ಉಂಟಾದ ಪ್ರಾಣಹಾನಿಯ ಹಿನ್ನೆಲೆಯಲ್ಲಿ ಮಲೆನಾಡು ಭಾಗದ ವಿದ್ಯಾರ್ಥಿಗಳು, ಪೋಷಕರ ಜೊತೆಗೆ ಮಂಗಳವಾರ ನಡೆಸಿದ ವೀಡಿಯೋ ಕಾನ್ಫರೆನ್ಸ್ನಲ್ಲಿ ತೀರ್ಥಹಳ್ಳಿ ತಾಲೂಕು ತಹಸೀಲ್ದಾರ್ ಆನಂದಪ್ಪ ನಾಯಕ್ ಜೊತೆಗೆ ಹೊಸೂರಿನ ಶಾಲಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಆಶ್ವೀಜಾ ಈ ರೀತಿಯ ಮನವಿ ಮಾಡಿದರು.