ದಾವಣಗೆರೆ, ಅ. 28: ಹಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಸೂಳೆಕೆರೆ ಹಳ್ಳದ ನೀರಿನ ರಭಸಕ್ಕೆ ಗ್ರಾಮಗಳ ಮಧ್ಯೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿದೆ.
ವರುಣನಾರ್ಭಟನಿಂದಾಗಿ ಸೂಳೆಕೆರೆ ಹಳ್ಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬಂದಿದ್ದು, ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋದ ಪರಿಣಾಮ ಬೆಳ್ಳೂಡಿ ಮತ್ತು ರಾಮತೀರ್ಥ ಗ್ರಾಮಗಳ ಮಧ್ಯೆ ಸಂಪರ್ಕ ಸಥಗಿತಗೊಂಡಿದೆ.