ಬೆಂಗಳೂರು, ಮೇ. 22, ನ್ಯೂಸ್ ಎಕ್ಸ್ ಪ್ರೆಸ್: ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ. ಸುಧಾಕರ್ ಬಿಜೆಪಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಎಕ್ಸಿಟ್ ಪೋಲ್ ಫಲಿತಾಂಶ ಬಂದ ನಂತರ ಇವಿಎಂ ಮತಯಂತ್ರಗಳಲ್ಲಿ ಟ್ಯಾಂಪರಿಂಗ್ ಮಾಡಲಾಗಿದೆ ಎಂಬ ಆರೋಪ ಮಾಡಲಾಗ್ತಿದೆ ಎಂದು ಶಾಸಕ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ‘ಎಕ್ಸಿಟ್ ಪೋಲ್’ ನಿಜವಾಗಲೂ ಜನರ ಮನದಲ್ಲಿರುವ ಅಭಿಪ್ರಾಯವನ್ನು ತಿಳಿಸುತ್ತಿದೆ ಹೀಗಂತ ಪರೋಕ್ಷವಾಗಿ ‘ಮೈತ್ರಿ’ ಸಾರ್ಕಾದ ಕುರಿತು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕಾಂಗ್ರೆಸ್ನ ನಾಯಕ ರೋಷನ್ ಬೇಗ್ ಪಕ್ಷದ ರಾಜ್ಯ ನಾಯಕರ ವಿರುದ್ಧ ಸಿಡಿದೆದ್ದ ಬೆನ್ನಲ್ಲೇ, ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಟ್ವೀಟ್ ಮಾಡಿರೋದು ಸಾಕಷ್ಟು ಗೊಂದಲ ಹುಟ್ಟುಹಾಕಿದೆ.
ಬಿಜೆಪಿ ಸೇರ್ತಾರಾ ಸುಧಾಕರ್..?
ಈ ಹಿಂದೆ ಶಾಸಕ ಸುಧಾಕರ್ ಬಿಜೆಪಿ ಸೇರ್ತಾರೆ ಎಂಬ ಸುದ್ದಿಗಳಿದ್ದವು. ಕುಮಾರಸ್ವಾಮಿ ವಿರುದ್ಧ ನೇರವಾಗಿ ಸುಧಾಕರ್ ಹರಿಹಾಯ್ದಿದ್ದರು. ಕಾಂಗ್ರೆಸ್ನ 20 ಶಾಸಕರು ಬಿಜೆಪಿ ಸೇರ್ತಾರೆ ಅಂತ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಸುಧಾಕರ್ ಈ ರೀತಿ ಟ್ವೀಟ್ ಮಾಡಿರೋದು ಸಾಕಷ್ಟು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.