ಬೆಂಗಳೂರು: ಸೂರ್ಯ ಕಂಪನಿಗೆ ರೆಡಿ ಮೀಕ್ಸ್ ಕಾಂಕ್ರೀಟ್ ಲಾರಿ ರಸ್ತೆ ದಾಟುತಿದ್ದ ಪಾದಾಚಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮುನಿಯಪ್ಪ (55) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಆಕ್ರೋಶಗೊಂಡ ಸಾರ್ವಜನಿಕರು, ಪದೇ ಪದೇ ಈ ಸ್ಥಳದಲ್ಲಿ ಅಪಘಾತಗಳು ನಡೆಯುತ್ತಿದ್ದರೂ ಎಚ್ಚೆತ್ತುಕೊಳ್ಳುತ್ತಿಲ್ಲವೆಂದು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುನಿಯಪ್ಪನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಟ್ರಾಫಿಕ್ ತಡೆಯಲು ಸ್ಕೈವಾಕ್ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಟ್ರಾಫಿಕ್ ಪೊಲೀಸರು ಮಧ್ಯಪ್ರವೇಶ ಮಾಡಿ, ಪ್ರತಿಭಟನಾಕಾರರ ನಡುವೆ ಸಂದಾನ ನಡೆಸಿ, ಸ್ಕೈವಾಕ್ ನಿರ್ಮಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ಸು ತೆಗೆದುಕೊಂಡಿದ್ದಾರೆ.