ನಿಮ್ಮ ಮನೆ ಬಾಗಿಲಿಗೆ ಬರುತ್ತೆ ಸರ್ಕಾರ!

ನಿಮ್ಮ ಮನೆ ಬಾಗಿಲಿಗೆ ಬರುತ್ತೆ ಸರ್ಕಾರ!

ಬೆಂಗಳೂರು, ಸೆ. 9: ಮುಖ್ಯಮಂತ್ರಿ ಯಡಿಯುರಪ್ಪನವರ ಸರ್ಕಾರವು ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದು, ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಕೆಳಹಂತದಲ್ಲೇ ಆಡಳಿತ ಸುಧಾರಣೆ ಮಾಡುವ ಮೂಲಕ ರೈತರು ಮತ್ತು ಜನಸಾಮಾನ್ಯರ ಮನೆ ಬಾಗಿಲಿಗೇ ತೆರಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಅವರು ಚಿಂತನೆ ನಡೆಸಿದ್ದು, ತಾಲೂಕು ಪಂಚಾಯತ್ ಅಧಿಕಾರಿಗಳು ವಾರದಲ್ಲಿ ಒಂದು ದಿನ ಒಂದೊಂದು ಹಳ್ಳಿಗೆ ಭೇಟಿ ನೀಡಬೇಕು. ಕಚೇರಿಯಲ್ಲಿ ಅಗತ್ಯ ಸಿಬ್ಬಂದಿಯನ್ನು ಹೊರತುಪಡಿಸಿ ಉಳಿದವರು ನಿಯೋಜಿತ ಹಳ್ಳಿಗೆ ತೆರಳಿ ಜನರ ಸಮಸ್ಯೆ ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲು ಪ್ರಯತ್ನಿಸಬೇಕು. ಈ ಮೂಲಕ ಜನರ ವಿಶ್ವಾಸ ಗಳಿಸಿ ಜನಪರ ಆಡಳಿತ ನೀಡಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos