ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯ ಮಕ್ಕಳು ಯಾರು ಏನೇ ಹೇಳಿದರು ಅವರು ಕೇಳುವ ಪ್ರಙ್ಞೆ ಇರುವುದಿಲ್ಲಾ. ಅದೇ ರೀತಿಯಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆಗೆ ಹೆದರಿ ಎಂಎಸ್ಸಿ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು 20 ವರ್ಷದ ಸತ್ಯಂ ಸುಮನ್ ಎಂದು ಗುರುತಿಸಲಾಗಿದೆ. ಅವರು ಬಿಹಾರ ಮೂಲದವರು. ಈ ಘಟನೆ ಶನಿವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾಲಯದಲ್ಲಿ ಶನಿವಾರ ಪರೀಕ್ಷೆ ನಡೆಯುತ್ತಿದ್ದಾಗ ಸತ್ಯ ಮಧ್ಯಾಹ್ನದ ಸುಮಾರಿಗೆ ಕಟ್ಟಡದ ಆರನೇ ಮಹಡಿಗೆ ಹೋಗಿದ್ದಾನೆ. ಕೆಲವು ವಿದ್ಯಾರ್ಥಿಗಳು ಅವನನ್ನು ನೋಡಿ ಕೆಳಗಿಳಿಯುವಂತೆ ಸಮಾಧಾನಪಡಿಸಲು ಪ್ರಯತ್ನಿಸಿದರು ಆದರೆ ಅದ್ಯಾವುದಕ್ಕೂ ಕೇರ್ ಮಾಡದೆ ಸತ್ಯಂ ಕಟ್ಟಡದಿಂದ ಜಿಗಿದಿದ್ದಾನೆ. ಕೂಡಲೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು ಅಷ್ಟರಲ್ಲಿ ಮೃತ ಪಟ್ಟಿದ್ದಾರೆ.