ಸಮ್ಮಿಶ್ರ ಸುಳಿವು ನೀಡಿದ :ಸಿದ್ದು

ಸಮ್ಮಿಶ್ರ ಸುಳಿವು ನೀಡಿದ :ಸಿದ್ದು

ಹುಬ್ಬಳ್ಳಿ, ನ. 25 : ಉಪಚುನಾವಣೆಯಲ್ಲಿ ನಿರೀಕ್ಷಿತ 8 ಸ್ಥಾನ ಗೆಲ್ಲದಿದ್ದರೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ಅನಿವಾರ್ಯವಾಗಿ ರಾಜೀನಾಮೆ ಕೊಡಬೇಕಾಗುತ್ತದೆ. ಈ ಹಂತದಲ್ಲಿ ಜೆಡಿಎಸ್ನವರು ಬಿಜೆಪಿ ಬೆಂಬಲಿಸುವುದಿಲ್ಲ ಎಂಬುದು ಗೊತ್ತಿದೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಸ್ವಾಭಾವಿಕವಾಗಿ ಪರಿಸ್ಥಿತಿ ಬದಲಾಗಲಿದೆ ಎಂದು ಸಿದ್ದರಾಮಯ್ಯ ಹೇಳುವ ಮೂಲಕ ಮತ್ತೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಜೆಡಿಎಸ್ ಪಕ್ಷವು ನೂರಕ್ಕೆ ನೂರರಷ್ಟು ಬಿಜೆಪಿ ಜತೆ ಕೈ ಜೋಡಿಸುವುದಿಲ್ಲ. ಇದು ನನಗೆ ಗೊತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿಗೆ 8 ಸ್ಥಾನ ಗೆಲ್ಲಬೇಕು. ಇಲ್ಲದಿದ್ದರೆ ಬಿಜೆಪಿ ಅಧಿಕಾರ ಬಿಟ್ಟು ಹೋಗಬೇಕಾಗುತ್ತದೆ. ಮತ್ತೆ ವಿಶ್ವಾಸಮತ ಯಾಚಿಸುವ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos