ಸೆ.೮ಕ್ಕೆ ಅಭಿನಂದನಾ ಸಮಾರಂಭ

ಸೆ.೮ಕ್ಕೆ ಅಭಿನಂದನಾ ಸಮಾರಂಭ

 ಔರಾದ:ರಾಜ್ಯ ಸರ್ಕಾರದ ಪ್ರತಿಷ್ಠಿತ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಭಾಜನರಾಗಿರುವ ಪೂಜ್ಯ ಡಾ.ಬಸವಲಿಂಗ ಪಟ್ಟದೇವ ಅವರಿಗೆ ಪಶು ಸಂಗೋಪನೆ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ನೇತೃತ್ವದಲ್ಲಿ ಸೆಪ್ಟೆಂಬರ್ 8ರಂದು ಡಾ.ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಡಾ.ಬಸವಲಿಂಗ ಪಟ್ಟದೇವ ಪ್ರಸ್ತುತ ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷರಾಗಿದ್ದು, ಬಸವವಾದಿ ಶರಣರ ಚಿಂತನೆಗಳನ್ನು ಪ್ರಸಾರ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಜೊತೆಗೆ ಸಮಾಜೋಧಾರ್ಮಿಕ ಚಿಂತನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಮೂಲಕ ಬಸವ ಪರಂಪರೆಯ ಆಶಯಗಳ ಈಡೇರಿಕೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ.
ಶಿಕ್ಷಣ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಪೂಜ್ಯರು, ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ, ಅನಾಥ ಮಕ್ಕಳಿಗೆ ಆಶ್ರಯದಾತರಾಗಿರುವ ಶ್ರೀಗಳ ಸೇವೆಯನ್ನು ಗುರುತಿಸಿ ಸರ್ಕಾರ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಂಬಂಧ ತಾಲ್ಲೂಕು ಮಟ್ಟದಲ್ಲಿ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ. ಸದ್ಭಕ್ತರು ಭಾಗವಹಿಸಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos