ಗ್ರಾಪಂ ಸದಸ್ಯರಿಗೆ ಅಭಿನಂದನೆ

ಗ್ರಾಪಂ ಸದಸ್ಯರಿಗೆ ಅಭಿನಂದನೆ

ದೇವನಹಳ್ಳಿ: ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯರು ಗ್ರಾಮಗಳ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಿದರೆ ಗ್ರಾಮಗಳ ಅಭಿವೃದ್ದಿಯಾಗುತ್ತದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಐಬಸಾಪುರ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಅಭಿನಂದಿಸಿ ಮಾತನಾಡಿ, ಪಕ್ಷ ಬೂತ್ ಮಟ್ಟದಿಂದ ಹೆಚ್ಚಿನ ಸಂಘಟನೆ ಆಗಬೇಕು ತಾಲ್ಲೂಕಿನಲ್ಲೂ ಅತಿ ಹೆಚ್ಚು ಜೆಡಿಎಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ ಗ್ರಾಮದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಐಬಸಾಪುರ ಗ್ರಾಮ ಪಂಚಾಯಿತಿ ಮಟ್ಟದ ಜೆಡಿಎಸ್ ಅಧ್ಯಕ್ಷ ಬಿ.ರಾಜಣ್ಣ, ಮುಖಂಡ ನಂಜೆರಗೌಡ, ಮಂಜುನಾಥ್ ಹಾಗೂ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos