ಮಾಲೂರು:ತಾಲೂಕಿನ ಚೊಕ್ಕಂಡಹಳ್ಳಿ ಗೇಟ್ ಬಳಿ ಇರುವ ಸಂಜೀವಿನಿ ಚಾರಿಟಬಲ್ ಟ್ರಸ್ಟ್ ಕಚೇರಿಯಲ್ಲಿ ಪತ್ರಕರ್ತ ಪಿ.ಪ್ರಕಾಶ್ ಅವರಿಗೆ ಜಿಲ್ಲಾ ಪತ್ರಕರ್ತ ಪುರಸ್ಕೃತ ಪ್ರಶಸ್ತಿ ಪಡೆದ ಹಿನ್ನೆಯಲ್ಲಿ ಟ್ರಸ್ಟ್ ಅಧ್ಯಕ್ಷ ಹೂಡಿ ವಿಜಯ್ಕುಮಾರ್ ಅವರು ಅಭಿನಂದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಂಗಾರಪೇಟೆ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಮಾಜಿ ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಆರ್.ವೆಂಕಟೇಶ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಆರಾಧ್ಯ, ಮುಖಂಡರಾದ ವಾಸು, ತಿಮ್ಮನಾಯಕನಹಳ್ಳಿ ನಾರಾಯಣಸ್ವಾಮಿ, ಸಿದ್ದನಹಳ್ಳಿ ಪ್ರಭಾಕರ್, ರೇಣುಕಾ ಪ್ರಸಾದ್, ಶಂಕರ್, ಪಟ್ಲಪ್ಪ, ವೆಂಕಟೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.