ಕಾಂಗ್ರೆಸ್ ನಾಯಕರನ್ನು ಸೆಳೆಯಲು ಬಿಜೆಪಿ ತೈಯಾರಿ

ಕಾಂಗ್ರೆಸ್ ನಾಯಕರನ್ನು ಸೆಳೆಯಲು ಬಿಜೆಪಿ ತೈಯಾರಿ

ಬೆಂಗಳೂರು, ಮಾ.9, ನ್ಯೂಸ್ ಎಕ್ಸ್ ಪ್ರೆಸ್: ಮುಂಬರು ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ, ಕಾಂಗ್ರೆಸ್ ಪಕ್ಷವು ಒಂದೆಡೆ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಇದ್ದರೆ ಇನ್ನೊಂದೆಡೆ ಕಾಂಗ್ರೆಸ್ ನಾಯಕರನ್ನು ಸೆಳೆಯಲು ಬಿಜೆಪಿ ತೈಯಾರಾಗಿದೆ. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಮನೆ ಬಾಗಿಲಿಗೆ ಹೋಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಚಿಕ್ಕೋಡಿ ಕ್ಷೇತ್ರದಿಂದ ರಮೇಶ್ ಜಾರಕಿಹೊಳಿಗೆ ಟಿಕೆಟ್ ನೀಡುವುದರ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಇಷ್ಟೇ ಅಲ್ಲದೆ ಬಳ್ಳಾರಿಯಿಂದ ನಾಗೇಂದ್ರ ಅಥವಾ ಆತನ ಸಹೋದರ ವೆಂಕಟೇಶ್ ಪ್ರಸಾದ್ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಅತೃಪ್ತ 4 ಶಾಸಕರ ಪೈಕಿ ಈಗಾಗಲೇ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಾಗಿದೆ. ಅಷ್ಟೇ ಅಲ್ಲದೆ ಮಾ.12ರಂದು ಸಭೆ ಕರೆದಿದ್ದು ಪಕ್ಷದ ನಿಯಮ ಉಲ್ಲಂಘನೆ ಕುರಿತು ಮಾಹಿತಿ ನೀಡಲಿದ್ದಾರೆ.

ಈಗಾಗಲೇ ರಮೇಶ್ ಜಾರಕಿಹೊಳಿ, ಬಿ ನಾಗೇಂದ್ರ ಹಾಗೂ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಬಿಜೆಪಿ ಸೇರಲಿದ್ದಾರೆ ಎನ್ನುವ ಗುಸುಗುಸು ಮಾತು ಕೇಳಿಬರುತ್ತಿದೆ. ಇದರ ಮಧ್ಯೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ಅತೃಪ್ತ ಶಾಸಕರ ಮನ ಒಲಿಸುವ ಕೆಲಸಕ್ಕೆ ಮುಂದಾಗಿದ್ದರು.

ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಬಿಜೆಪಿ ಮತ್ತೆ ಕಾಂಗ್ರೆಸ್ನ ಅತೃಪ್ತ ಶಾಸಕರನ್ನು ಸೆಳೆಯುವ ಕೆಲಸವನ್ನು ಮುಂದುವರೆಸಿದೆ. ಎಲ್ಲಾ ಮುಂದಿನ ತೀರ್ಮಾನಗಳು ರಮೇಶ್ ಜಾರಕಿಹೊಳಿ ನಿರ್ಧಾರದ ಮೇಲೆ ನಿಂತಿದೆ.

ಫ್ರೆಶ್ ನ್ಯೂಸ್

Latest Posts

Featured Videos