ಕಾಂಗ್ರೆಸ್ ವಕ್ತಾರ ಬರ್ಬರ ಹತ್ಯೆ

ಕಾಂಗ್ರೆಸ್ ವಕ್ತಾರ ಬರ್ಬರ ಹತ್ಯೆ

ಫರಿದಾಬಾದ್, ಜೂ. 27 : ಹರಿಯಾಣಾದ ಕಾಂಗ್ರೆಸ್ ವಕ್ತಾರರಾಗಿದ್ದ ವಿಕಾಸ್ ಚೌಧರಿ ಅವರನ್ನು ಗುರುವಾರ ಬೆಳಗ್ಗೆ ದುಷ್ಕರ್ಮಿಗಳ ಗುಂಪು ಭೀಕರ ಗುಂಡಿನ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದಿದ್ದಾರೆ.

ಜಿಮ್ಗೆ ಆಗಮಿಸಿದ್ದ ಚೌಧರಿ ಅವರು ಕಾರಿನಿಂದ ಇಳಿಯುತ್ತಿದ್ದಂತೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. 8 ರಿಂದ 10 ಗುಂಡುಗಳನ್ನು ಚೌಧರಿ ಅವರನ್ನು ಗುರಿಯಾಗಿರಿಸಿಕೊಂಡು ಹಾರಿಸಲಾಗಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ದುಷ್ಕರ್ಮಿಗಳ ಪತ್ತೆಯಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಪೊಲೀಸರ ತಂಡಗಳನ್ನು ತನಿಖೆಗಾಗಿ ರಚಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos