ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ!

ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ!

ಕೆ.ಆರ್.ಪುರ, ಜು. 13 : ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ರಾಜೀನಾಮೆ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 207 ತಡೆದು ಪ್ರತಿಭಟನೆ ನಡೆಸಿದರು.

ಮಾಜಿ ನಗರಸಭಾ ಅಧ್ಯಕ್ಷ ಹಾಗೂ ಕೆ.ಆರ್.ಪುರ ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಮಾತನಾಡಿ, ಬಿಜೆಪಿ ಕುದುರೆ ವ್ಯಾಪಾರಕ್ಕೆ ಪ್ರೆರೆಪಿಸುತ್ತಿದೆ. ಕ್ಷೇತ್ರದ ಶಾಸಕ ಶಾಸಕ ಬೈರತಿ ಬಸವರಾಜ್ ಐದು ವರ್ಷಗಳ ಕಾಲ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಾರೆ ಎಂಬ ವಿಶ್ವಾಸದಿಂದ ಚುನಾವಣೆಯಲ್ಲಿ ಆಯ್ಕೆ ಮಾಡಿದ್ದೇವೆ. ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ನಿಷ್ಠೆಗಾಗಿ ಹಗಲಿರುಳು ದುಡಿದಿದ್ದಾರೆ. ಕ್ಷೇತ್ರದ ಉನ್ನತ್ತಿಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಸಕ ಬೈರತಿ ಬಸವರಾಜ್ ಅವರನ್ನು ಎರಡನೇ ಬಾರಿಗೆ ಆರಿಸಿ ಕಳುಹಿಸಲಾಗಿದೆ. ಈಗ ಬಿಜೆಪಿಯ ಒತ್ತಡಕ್ಕೆ ಮಣಿದು ಶಾಸಕ ಬೈರತಿ ಬಸವರಾಜ್ ರಾಜಿನಾಮೆ ಸಲ್ಲಿಸಿರುವುದು ನಿಷ್ಠಾವಂತ ಕಾರ್ಯಕರ್ತರಿಗೆ ನೋವಾಗಿದೆ ಎಂದರು.

ಮಾಜಿ ನಗರಸಭಾ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಎಂ ಮಂಜುನಾಥ್, ಬಿಜೆಪಿ ಅಡ್ಡ ಮಾರ್ಗ ಹಿಡಿದು ಹಿಂಬಾಗಿಲ ಮೂಲಕ ರಾಜಕಾರಣ ಮಾಡುತ್ತಿದೆ. ಬಿಜೆಪಿ ವಾಮಮರ್ಗದಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಶಾಸಕರಿಗೆ ಆಮಿಷಗಳನ್ನು ಒಡ್ಡಿ ಒತ್ತಡ ಹಾಕಿದೆ. ಕಾಂಗ್ರೆಸ್ ಶಾಸಕರು ಪಕ್ಷ ದ್ರೋಹ ಬಗೆಯದೆ ರಾಜಿನಾಮೆ ವಾಪಸ್ ಪಡೆಯುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು. ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ರಾಜಿನಾಮೆ ವಾಪಸ್ ಪಡೆದು ಕ್ಷೇತ್ರಕ್ಕೆ ಬರಬೇಕು ಇಲ್ಲದೆ ಹೋದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos