ಅಹ್ಮದಾಬಾದ್, ಏ. 10, ನ್ಯೂಸ್ ಎಕ್ಸ್ ಪ್ರೆಸ್: ಗುಜರಾತ್ ನ ಕಾಂಗ್ರೆಸ್ ಒಬಿಸಿ ನಾಯಕ ಅಲ್ಪೇಸ್ ಠಾಕೂರು ಕಾಂಗ್ರೆಸ್ ತೊರೆಯಲಿದ್ದಾರೆ.
ಠಾಕೂರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎಂಬ ವದಂತಿ ಇದ್ದರೂ, ಠಾಕೂರು ಬಿಜೆಪಿ ಸೇರುವ ಬಗ್ಗೆ ಇನ್ನೂ ಸ್ಪಷ್ಪಪಡಿಸಿಲ್ಲ.
ಠಾಕೂರು ಸಮುದಾಯದ ಹಿತಕ್ಕಾಗಿ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡೇ ಹೋರಾಟ ಮುಂದುವರಿಸುವುದಾಗಿ ಹೇಳಿದ್ದರು.
ಆದರೆ ಈಗ ಅವರ ನಿಲುವು ಬದಲಾದಂತಿದೆ. ಅವರು ಲೋಕಸಭಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುಜರಾತ್ ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.