ಭವಿಷ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ಗೆ ಅಸ್ತಿತ್ವವೇ ಇರುವುದಿಲ್ಲ: ಶ್ರೀರಾಮುಲು

ಭವಿಷ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ಗೆ ಅಸ್ತಿತ್ವವೇ ಇರುವುದಿಲ್ಲ: ಶ್ರೀರಾಮುಲು

ದಾವಣಗೆರೆ, ನ. 28: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದಿಲ್ಲ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ನಿಟ್ಟುವಳ್ಳಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಶಿವಸೇನೆಯು ಎನ್ ಸಿಪಿ ಹಾಗೂ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಿದೆ. ಆದರೆ ಇಲ್ಲಿ ಅದು ಆಗುವುದಿಲ್ಲ. ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ, ನಾನು ಸರ್ಕಾರ ಬೀಳಿಸೋದಿಲ್ಲ ಎಂದು ಹೇಳುತ್ತಾರೆ, ಮತ್ತೊಂದೆಡೆ ಅನರ್ಹರು ಸೋಲಬೇಕೆಂದು ಹೇಳುತ್ತಾರೆ. ಈ ಮೂಲಕ ದ್ವಂದ್ವ ಚುನಾವಣಾ ರಾಜಕಾರಣ ಪ್ರಾರಂಭ ಮಾಡಿದ್ದಾರೆ. ಭವಿಷ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ಗೆ ಅಸ್ತಿತ್ವವೇ ಇರುವುದಿಲ್ಲ. ಬಿಜೆಪಿಗೆ ಭವಿಷ್ಯ ಇದೆ, ಜನರ ಆಶೀರ್ವಾದ ಇದೆ ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos