ಬೆಂಗಳೂರು, ಜು. 15 : ಬಹುಮತ ಇಲ್ಲ ಅಂದ್ಮೇಲೆ ಸೈಲೆಂಟಾಗಿ ಇರಬೇಕಿತ್ತು. ಜನ ತಿರಸ್ಕಾರ ಮಾಡಿದರೂ ಬಲವಂತ ಹಿಂಬಾಗಿಲಿಂದ ಕಾಂಗ್ರೆಸ್- ಜೆಡಿಎಸ್ ಅಪಮೈತ್ರಿ ಮಾಡಿಕೊಂಡಿತು ಎಂದು ಕೋಲಾರ ಸಂಸದ ಮುನಿಸ್ವಾಮಿ ಟಾಂಗ್ ನೀಡಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಮೊದಲೇ ಸರ್ಕಾರಕ್ಕೆ ಬಹುಮತ ಇರಲಿಲ್ಲ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ ಹೀಗಾಗಿ ಮತ್ತೆ ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ನೇಕಾಂಗ್ರೆಸ್- ಜೆಡಿಎಸ್ ನಾಯಕರು ಅವರಾಗಿ ಅವರೇ ಜಗಳ ಮಾಡುತ್ತಿದ್ದಾರೆ. ನಮ್ಮ ಪಕ್ಷಕ್ಕೆ ನಾವು ಯಾರನ್ನೂ ಕರೆದಿಲ್ಲ. ನಾವೇನು ಕೈಲಾಗದಿದ್ದವರು ಅಲ್ಲ, ಅವಕಾಶ ಸಿಕ್ಕಾಗ ಸರ್ಕಾರ ರಚನೆಗೆ ಹೈಕಮಾಂಡ್ ಹಾಗೂ ಯಡಿಯೂರಪ್ಪ ಸಿದ್ಧರಿದ್ದಾರೆ. ಅದಕ್ಕಾಗಿಯೇ ಅವಕಾಶ ಒಲಿದು ಬಂದಾಗ ಸರ್ಕಾರ ರಚನೆ ಮಾಡಿಯೇ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.