ಇಂದು ಸಂಜೆ `ಕೈ’ ಸಚಿವರ ಸಭೆ ಕರೆದ ಕೆ.ಸಿ.ವೇಣುಗೋಪಾಲ್

ಇಂದು ಸಂಜೆ `ಕೈ’ ಸಚಿವರ ಸಭೆ ಕರೆದ ಕೆ.ಸಿ.ವೇಣುಗೋಪಾಲ್

ಬೆಂಗಳೂರು, ಮಾ.29, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಪಕ್ಷದ ಸಚಿವರ ಸಭೆ ಕರೆದಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಯಲ್ಲಿ ಇಂದು ಸಂಜೆ 5 ಗಂಟೆಗೆ ಸಭೆ ಆಯೋಜನೆ ಮಾಡಲಾಗಿದ್ದು, ಲೋಕಸಭೆ ಚುನಾವಣೆಗೆ ಕ್ಷೇತ್ರವಾರು ಚುನಾವಣಾ ಉಸ್ತುವಾರಿಗಳ ನೇಮಕದ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್, ಒಂದೊಂದು ಲೋಕಸಭಾ ಕ್ಷೇತ್ರದ ಜವಾಬ್ದಾರಿಯನ್ನು ಪಕ್ಷದ ಸಚಿವರಿಗೆ ವಹಿಸಲಿದ್ದಾರೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos