ನವದೆಹಲಿ: ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಊಹಾಪೋಹಗಳು ಶುದ್ಧ ಸುಳ್ಳು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ 3 ಶಾಸಕರು ಮುಂಬೈನಲ್ಲಿದ್ದು, ಅವರೆಲ್ಲರೂ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದು ಸಳ್ಳು. ಇದು ಕಾಂಗ್ರೆಸ್-ಜೆಡಿಎಸ್ ನಡುವೆಯಷ್ಟೆ ಹರಿದಾಡುತ್ತಿರುವ ಗಾಳಿ ಸುದ್ದಿ. ಇದಕ್ಕೂ ನಮಗೂ ಸಂಬಂಧವಿಲ್ಲ. ನಾವು ನಮ್ಮ ಶಾಸಕರಿಗೆ ಹೇಗೆ ಬಲ ತುಂಬಬಹುದು ಎಂಬ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದೇವೆ. ಇದಕ್ಕೂ ಮುನ್ನ ಮಾತನಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ಜತೆ ಸಂಪರ್ಕದಲ್ಲಿದ್ದು, ಮುಂಬೈನಲ್ಲಿರುವ ಕಾಂಗ್ರೆಸ್ನ 3 ಶಾಸಕರು ಯಾರೆಂಬುದು ನಮಗೆ ಗೊತ್ತು. ಅವರಿಂದ ಸರ್ಕಾರಕ್ಕೆ ಯಾವುದೇ ಅಭದ್ರತೆ ಇಲ್ಲ ಎಂದಿದ್ದರು.