ಸಂಸತ್ ಆವರಣದಲ್ಲಿ ಕಾಗದದ ವಿಮಾನ ಹಾರಿಸಿದ ಕಾಂಗ್ರೆಸ್ ಸಂಸದರು!

ಸಂಸತ್ ಆವರಣದಲ್ಲಿ ಕಾಗದದ ವಿಮಾನ ಹಾರಿಸಿದ ಕಾಂಗ್ರೆಸ್ ಸಂಸದರು!

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಹಗರಣ ನಡೆಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಇಂದು ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಾಗದದ ವಿಮಾನ ಹಾರಿಸಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮೋದಿ ವಿರುದ್ಧದ ಪೋಸ್ಟರ್ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ರಾಹುಲ್ ಗಾಂಧಿ ವಹಿಸಿದ್ದರು. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos