ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ
ಕುದುರೆ ವ್ಯಾಪಾರಕ್ಕಿಳಿದಿದ್ದು, ಕೋಟಿ ಕೋಟಿ ರೂ.ಗಳನನ್ನು ಕೊಟ್ಟು ಕಾಂಗ್ರೆಸ್ ಶಾಸಕರನ್ನು
ಡೀಲ್ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಸಂಸತ್ ಭವನದ ಮುಂದೆ ಸೋಮವಾರ
ಪ್ರತಿಭಟನೆ ನಡೆಸಿದರು.
ಸಂಸತ್ ಕಲಾಪ ಆರಂಭಕ್ಕೂ ಮುನ್ನ ಪಾರ್ಲಿಮೆಂಟ್ ಭವನದ ಎದುರಿರುವ ಗಾಂಧಿ ಪ್ರತಿಮೆ ಬಳಿ ಸಮಾವೇಶಗೊಂಡ ಮಲ್ಲಿಕಾರ್ಜುನ್ ಖರ್ಗೆ, ವೀರಪ್ಪ ಮೊಯ್ಲಿ, ಮುನಿಯಪ್ಪ, ಧೃವ ನಾರಾಯಣ್, ಡಿ.ಕೆ. ಸುರೇಶ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೊ ಕ್ಲಿಪ್ನಿಂದ ಮಾಜಿ ಸಿಎಂ ಬಿಎಸ್ವೈ ನಡೆಸಿರುವ ಕುದುರೆ ವ್ಯಾಪಾರ ಬಹಿರಂಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಿಎಸ್ವೈ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಆಪರೇಷನ್ ಕಮಲದಿಂದ ಸಂವಿಧಾನದ ಕೊಲೆಯಾಗುತ್ತಿದೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಮಾರಾಟಕ್ಕಿದೆ, ಕುದುರೆ ವ್ಯಾಪಾರ ಬೇಡ ಎಂಬ ಪ್ಲೇಕಾರ್ಡ್ಗಳನ್ನು ಹಿಡಿದು ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದರ.