ಬೆಂಗಳೂರು, ಸೆ. 18: ಇಂದು ನಗರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನವರು, ರಾಜ್ಯ ಸರ್ಕಾರ ಪ್ರವಾಹ ಪರಿಹಾರ ಕಾರ್ಯಗಳನ್ನು ಸಮರ್ಪಕವಾಗಿ ಮಾಡಿತ್ತಿದೆ. ಕಾಂಗ್ರೆಸ್ ನಾಯಕರಿಗೆ ಬೇರೆ ಕಾರ್ಯಕ್ರಮವಿಲ್ಲದರಿಂದ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡ ವರಿಗೆ ಮನೆ ನಿರ್ಮಿಸುವ ಕಾರ್ಯ ಆರಂಭವಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಒಟ್ಟಿಗೆ ಅನುದಾನ ಬಿಡುಗಡೆ ಮಾಡಲಿದೆ. ಪ್ರಧಾನಿಯವರ ಬಳಿ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಅಗತ್ಯವಿಲ್ಲ ಎಂದು ತಿಳಿಸಿದರು.