ಯು.ಟಿ.ಖಾದರ್ ಹತ್ಯೆಗೆ ಸಂಚು!

ಯು.ಟಿ.ಖಾದರ್ ಹತ್ಯೆಗೆ ಸಂಚು!

ಮಂಗಳೂರು, ಮಾ. 06: ಕಾಂಗ್ರೆಸ್ ಮುಖಂಡ, ಉಳ್ಳಾಲ ಶಾಸಕ ಯು.ಟಿ.ಖಾದರ್ ಹತ್ಯೆಗೆ ಸಂಚು ರೂಪಿಸಲಾಗಿದೆ ಅನ್ನೋ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.

ಈ ಹಿಂದೆ ಮಾಜಿ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಮೈಸೂರಿನಲ್ಲಿ ಕೊಲೆ ಯತ್ನ ನಡೆದಿತ್ತು. ಸದ್ಯ ಖಾದರ್ ಹತ್ಯೆಗೂ ಸಂಘಟನೆಯೊಂದು ಸ್ಕೆಚ್ ಹಾಕಿರೋದಾಗಿ ಗುಪ್ತಚರ ಇಲಾಖೆ, ಗೃಹ ಇಲಾಖೆಗೆ ಮಾಹಿತಿ ನೀಡಿದೆ.

ಗುಪ್ತಚರ ಇಲಾಖೆಯು ಯು.ಟಿ.ಖಾದರ್ ಹತ್ಯೆಗೆ ಸಂಚು ರೂಪಿಸುವ ಮಾಹಿತಿ ಪಡೆದಿತ್ತು. ಬಳಿಕ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಗೆ ಭದ್ರತೆ ನೀಡಬೇಕು ಎಂದು ಮಂಗಳೂರು ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ನೀಡಿದ್ದಾರೆ.

ಗುಪ್ತಚರ ಇಲಾಖೆ ಈ ವಿಚಾರ ತಿಳಿಸಿದ ಬೆನ್ನಲ್ಲೇ ಎಚ್ಚರಗೊಂಡ ಸರ್ಕಾರ ಖಾದರ್ ಅವರಿಗೆ ಭದ್ರತೆ ಹೆಚ್ಚು ಮಾಡಲು ಸೂಚಿಸಿದೆ. ಆದರೆ ಖಾದರ್ ನನಗೆ ಯಾವುದೇ ಜೀವಭಯ ಇಲ್ಲ ಎಂದು ಹೇಳಿ ಭದ್ರತೆಯನ್ನು ನಿರಾಕರಿಸಿದ್ದಾರೆ. ಭದ್ರತೆ ನಿರಾಕರಿಸಿದ ವಿಚಾರ ತಿಳಿದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯ ಮೂಲಕ ಖಾದರ್ ಅವರ ಮನ ಒಲಿಸಲು ಮುಂದಾಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos