ಕಂಟೇನರ್ ಲಾರಿ ಬೈಕಿಗೆ ಡಿಕ್ಕಿ; ಸ್ಥಳದಲ್ಲೇ ಬೈಕ್ ಸವಾರ ಸಾವು

ಕಂಟೇನರ್ ಲಾರಿ ಬೈಕಿಗೆ ಡಿಕ್ಕಿ; ಸ್ಥಳದಲ್ಲೇ ಬೈಕ್ ಸವಾರ ಸಾವು

ನೆಲಮಂಗಲ, ಮಾ.9, ನ್ಯೂಸ್ ಎಕ್ಸ್ ಪ್ರೆಸ್:  ಕಂಟೇನರ್ ಲಾರಿ ಬೈಕಿಗೆ ಡಿಕ್ಕಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಎಪಿಎಂಸಿ ಬಳಿ ನಡೆದಿದೆ.

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದ ಮಂಜುನಾಥ್(25)  ಮೃತಪಟ್ಟ ದುರ್ದೈವಿ.

ಕೆಲ ದಿನಗಳ ಹಿಂದೆ ಮೃತ ಮಂಜುನಾಥ್, ಮಾದನಾಯಕನಹಳ್ಳಿ ಗ್ರಾಮದಲ್ಲಿ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದನು.

ಕಂಟೇನರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos