ಹುಬ್ಬಳ್ಳಿ, ಫೆ. 01: ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ವತಿಯಿಂದ ವೇತನ ಪರಿಷ್ಕರಣ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನವಾದ ಇಂದು ಕೂಡ ಮುಂದುವರೆದಿದ್ದು, ನಗರದ ಅಂಬೇಡ್ಕರ್ ವೃತ್ತದ ಬಳಿ ಇರುವ ಯುನಿಯನ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ವೇತನ ಪರಿಷ್ಕರಣ, ಐದು ದಿನದ ಬ್ಯಾಂಕಿಂಗ್ ಜಾರಿಗೊಳಿಸುವುದು, ಪಿಂಚಣಿ ಮತ್ತು ಕುಟುಂಬ ಪಿಂಚಣಿಯಲ್ಲಿ ಸುಧಾರಣೆ, ಹೊಸ ಪಿಂಚಣಿ ರದ್ದುಗೊಳಿಸುವಂತೆ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಮುಷ್ಕರದಲ್ಲಿ ಏಐಬಿಇಒ, ಎಐಬಿಒಸಿ, ಎನ್ಸಿಬಿಇ, ಎಐಬಿಓಎ, ಬಿಇಎಫ್ಐ, ಐಎಬಿಇಎಫ್, ಐಎನ್ಸಿಓಸಿ, ಎನ್ಓಬಿಡಬ್ಲೂ, ಎನ್ಓಬಿಓ ಬ್ಯಾಂಕ್ ಸಂಘಟನೆಗಳು ಬೆಂಬಲ ಸೂಚಿಸಿದ್ದು,ಕೂಡಲೇ ಬ್ಯಾಂಕ್ ಕಾರ್ಮಿಕರ ಬೇಡಿಕೆಯನ್ನು ಈಡೇರಿಸುವಂತೆ ಘೋಷಣೆ ಕೂಗಿದರು.