ಕಾಟನ್ ಪೇಟಯಲ್ಲಿ ಅಗ್ನಿ ಅವಘಡ

ಕಾಟನ್ ಪೇಟಯಲ್ಲಿ ಅಗ್ನಿ ಅವಘಡ

ಬೆಂಗಳೂರು, ಅ.21 : ನಗರದ ಕಾಟನ್ ಪೇಟೆಯಲ್ಲಿಂದು ನಸುಕಿನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಇಬ್ಬರು ಮಕ್ಕಳು ಮೃತ ಪಟ್ಟಿದ್ದು, ತಂದೆ-ತಾಯಿ ಗಂಬೀರಗಾಯಗೊಂಡಿದ್ದಾರೆ.
ಕಾಟನ್ ಪೇಟೆಯಲ್ಲಿ ದುರ್ಘಟನೆ ಸಂಭವಿಸಿದೆ. ಕಾವೇರಿ (21) ಶ್ರೀಕಾಂತ(13) ಮೃತರು. ಗಂಭೀರ ಸ್ಥಿತಿಯಲ್ಲಿರುವ ಪತಿ ಮುರಳಿ ಮತ್ತು ಪತ್ನಿ ಗೀತಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಕಾಟನ್ ಪೇಟೆ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos