ಡಿಸಿಎಂ ಕುಟುಂಬದವರಿಗೆ ಕೊರೋನ

ಡಿಸಿಎಂ ಕುಟುಂಬದವರಿಗೆ ಕೊರೋನ

ಬೆಂಗಳೂರು : ನಾನೂ ಸೇರಿದಂತೆ ಕುಟುಂಬದ ಎಂಟು ಮಂದಿ ಕೋವಿಡ್ ಬಾಧಿತರಾಗಿದ್ದೇವೆ. ಪುತ್ರ ಡಾ. ಗೋಪಾಲ ಕಾರಜೋಳ 23 ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದಾನೆ.

ಇಂಥ ಸಂಕಷ್ಟದ ಸಂದರ್ಭದಲ್ಲಿ ಒಂದು ಘಟನೆಯಿಂದ ಅಳೆಯಲು ಹೋಗಬೇಡಿ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.
ಶಿರಾ ಅಸೆಂಬ್ಲಿ ಕ್ಷೇತ್ರದ ಉಪಚುನಾವಣೆಯ ಪಕ್ಷದ ಅಭ್ಯರ್ಥಿ ಡಾ.ರಾಜೇಶ್ ಗೌಡ ನಾಮಪತ್ರ ಸಲ್ಲಿಕೆಯ ವೇಳೆ ಹಾಜರಾಗಿದ್ದ ಕಾರಜೋಳ ಅವರಿಗೆ, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡದೇ ಇರುವ ಆಪಾದನೆ ಎದುರಾಗಿದೆ.

ನನ್ನ ಪುತ್ರ ಡಾ. ಗೋಪಾಲ ಕಾರಜೋಳ ಕಳೆದ 23 ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನನ್ನ ಧರ್ಮ ಪತ್ನಿ ಕೂಡಾ ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಆಸ್ಪತ್ರೆಯಿಂದ ಹಿಂದಿರುಗಿದ್ದಾರೆ. ನಾನೂ ಕೂಡಾ ಕೋವಿಡ್ 19ಕ್ಕೆ ಒಳಗಾಗಿ ಗುಣಮುಖನಾಗಿ ಹಿಂದಿರುಗಿದ್ದೇನೆ.

 

ಫ್ರೆಶ್ ನ್ಯೂಸ್

Latest Posts

Featured Videos