ಚಿಕ್ಕಮಗಳೂರು, ಏ. 25, ನ್ಯೂಸ್ ಎಕ್ಸ್ ಪ್ರೆಸ್: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರುನಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡುತ್ತಿದ್ದ 3 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ ಮೂಲದ ವೆಂಕಟೇಶ್, ನರಸಿಂಹಮೂರ್ತಿ ಹಾಗೂ ಭಾರ್ಗವ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಬಾಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಐಚರ್ ವಾಹನದಲ್ಲಿ 15 ಕ್ಕೂ ಹೆಚ್ಚು ದನಗಳನ್ನ ತುಂಬಿಕೊಂಡು ಹೋಗುತ್ತಿದ್ದರು. ಅನುಮಾನಗೊಂಡ ಬಾಳೂರು ಪೊಲೀಸರು ವಾಹನ ತಪಾಸಣೆ ಮಾಡಿದಾಗ 15 ಕ್ಕೂ ಹೆಚ್ಚು ದನಗಳನ್ನು ಅಕ್ರಮವಾಗಿ ತುಂಬಿರೋದು ಕಂಡು ಬಂತು. ಈ ಹಿನ್ನೆಲೆಯಲ್ಲಿ 3 ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದರೆ, ಮತ್ತೊಬ್ಬ ಆರೋಪಿ ವಾಹನ ಚಾಲನ ಶಶಿಧರ ಪರಾರಿಯಾಗಿದ್ದಾನೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.