ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ದದ ಮೀಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಕೆಗೆ ಕಾಲಾವಕಾಶ ನೀಡಲು ಕೇಂದ್ರ ಡಿಸಿಪಿ ಅವರಿಂದ ಕಬ್ಬನ್ ಪಾರ್ಕ್ ಪೊಲೀಸರು ಅನುಮತಿ ಪಡೆದಿದ್ದಾರೆ.
ತನಿಖೆಗೆ ಕಾಲವಕಾಶ ಬೇಕು ಸಾಕ್ಷಿಗಳ ವಿಚಾರಣೆ ಬಾಕಿ ಇದೆ. ಹೀಗಾಗಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲು ಕಾಲಾವಾಕಾಶ ಬೇಕಿರುವುದಾಗಿ ಕಬ್ಬನ್ಪಾರ್ಕ್ ಪೊಲೀಸರು ಡಿಸಿಪಿಗೆ ಕೋರಿದ್ದಾರೆ ಎನ್ನಲಾಗಿದೆ.
ದೂರು ನೀಡಿದ 90 ದಿನಗಳ ಒಳಗೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕು. ಆದರೆ ಕಬ್ಬನ್ ಪಾರ್ಕ್ ಪೊಲೀಸರು ಈ ಪ್ರಕರಣದಲ್ಲಿ ಇನ್ನೂ ಸಾಕ್ಷಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.