ಬೆಂಗಳೂರು, ಏ. 27, ನ್ಯೂಸ್ ಎಕ್ಸ್ ಪ್ರೆಸ್: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಬಾಲಕನ ಪ್ರಾಣಕ್ಕೆ ಕುತ್ತು ತಂದಿದೆ. 9 ವರ್ಷದ ಬಾಲಕ ಸಾಯಿ ಚರಣ್ ಮೇಲೆ ವಿದ್ಯುತ್ ಹರಿದಿದೆ. ಮಹಾಲಕ್ಷ್ಮಿ ಲೇಔಟ್ ನ ನಾಗಲಿಂಗೇಶ್ವರ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಬಾಲಕನ ಮೇಲೆ ವಿದ್ಯುತ್ ಪ್ರವಹಿಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರಸ್ತೆ ಬದಿ ಆಟವಾಡುತ್ತಿದ್ದಾಗ ಪುಡ್ ಪಾತ್ ಮೇಲಿದ್ದ ವಿದ್ಯುತ್ ತಂತಿ ಮೇಲೆ ಬಾಲಕ ಕಾಲಿಟ್ಟಿದ್ದಾನೆ. ಈ ವೇಳೆ ವಿದ್ಯುತ್ ಪ್ರವಹಿಸಿ ಬಾಲಕನ ಸ್ಥಿತಿ ಗಂಭೀರವಾಗಿದೆ. ಸದ್ಯ ಆತ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.