ಡಿ ಬಾಸ್‌ ಎಂಟ್ರಿಗೆ :`D 25 ಬೆಳ್ಳಿ ಪರ್ವ’

ಡಿ ಬಾಸ್‌ ಎಂಟ್ರಿಗೆ :`D 25 ಬೆಳ್ಳಿ ಪರ್ವ’

ಬೆಂಗಳೂರು: ನಮ್ಮ ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಸ್ವಲ್ಪ ಟಾಪ್ ನಟರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಒಬ್ಬರು ಇವರಿಗೆ ಈಡೀ, ಕರ್ನಾಟಕದಾತ್ಯ ಅತಿ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿದ್ದಾರೆ ಹಾಗೂ ಅಭಿಮಾನಿಗಳು ಇವರನ್ನು ದೇವರ ರೀತಿಯಲ್ಲಿ ಪೂಜಿಸುತ್ತಾರೆ.

ಒಬ್ಬ ಹೀರೋ ಸಿನಿ ರಂಗದಲ್ಲಿ ಸರ್ವೈವ್ ಆಗೋದು ತುಂಬಾ ಚಾಲೇಂಜ್. ಅದರಲ್ಲೂ ಬೆಳ್ಳಿ ಹಬ್ಬ ಮಾಡುವಷ್ಟು ವರ್ಷ ತಮ್ಮ ಚಾರ್ಮ್ ಸ್ಟಾರಿಸಂ ಕಾಪಾಡಿಕೊಳ್ಳೋದು ಒಂದು ಸಾಹಸವೇ ಸರಿ. ಇದೀಗ ನಟ ದರ್ಶನ್ ಚಿತ್ರರಂಗದಲ್ಲಿ ಬೆಳ್ಳಿ ಹಬ್ಬ ಆಚರಿಸಿಕೊಳ್ಳೋ ಟೈಂ ಬಂದಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳು ಕಳೆದಿವೆ. ಬಾಕ್ಸ್ ಆಫೀಸ್ ಸುಲ್ತಾನ, ಚಾಲೆಂಜಿಂಗ್ ಸ್ಟಾರ್ ಸೇರಿ ಹಲವು ಬಿರುದುಗಳು ಅವರಿಗೆ ಇದೆ. ಅವರು 25 ವರ್ಷಗಳಲ್ಲಿ ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ. ಅವರನ್ನು ಆರಾಧಿಸುವ ಅಭಿಮಾನಿ ವರ್ಗ ದೊಡ್ಡದಿದೆ. ಈಗ ದರ್ಶನ್ ಅವರ ಫ್ಯಾನ್ಸ್ ‘ಬೆಳ್ಳಿ ಪರ್ವ’ಆಚರಣೆಗೆ ಮುಂದಾಗಿದ್ದಾರೆ. ಅದ್ದೂರಿಯಾಗಿ ಈ ಕಾರ್ಯಕ್ರಮ ನಡೆಯಲಿದೆ.

ಇಂದು ಸಂಜೆ 5 ಗಂಟೆಗೆ ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದ ಮೈದಾನದಲ್ಲಿ ಆದಿ ಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮಿ ದಿವ್ಯ ಸಾನಿಧ್ಯದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಅಭಿಮಾನಿಗಳು ನಟ ಚಾಲೆಂಜಿಂಗ್ ಸ್ಟಾರ್ ಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸುಮಾರು 25 ಸಾವಿರ ಜನರು ಕೂರುವ ಆಸನದ ವ್ಯವಸ್ಥೆ ಮಾಡಲಾಗಿದ್ದು, ನಿರ್ದೇಶಕ ಮಹೇಶ್ ಸುಖಧರೆ ಮಾರ್ಗದರ್ಶನದಲ್ಲಿ ನಿರ್ಮಾಣಗೊಂಡಿರುವ ಬೃಹತ್ ವೇದಿಕೆ ಸಿದ್ಧಗೊಂಡಿದೆ.

ಫ್ರೆಶ್ ನ್ಯೂಸ್

Latest Posts

Featured Videos