ಬೆಂಗಳೂರು: ನಮ್ಮ ಸ್ಯಾಂಡಲ್ ವುಡ್ ನ ಟಾಪ್ ನಟರಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಒಬ್ಬರು ಇವರಿಗೆ ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿದ್ದಾರೆ, ಅಭಿಮಾನಿಗಳು ಪ್ರೀತಿಯಿಂದ ಇವರನ್ನು ಡಿ ಬಾಸ್ ಎಂದು ಕರೆಯುತ್ತಾರೆ. ದರ್ಶನ್ ನಟನೆಯ ಕಾಟೇರ ಸಿನಿಮಾ ಇಡೀ ರಾಜದಾದ್ಯಂತ ಅತ್ಯಂತ ಭರ್ಜರಿ ಯಶಸ್ಸನ್ನು ಕಂಡಿದ್ದು. ದರ್ಶನ್ ನಟನೆಯ ಮುಂದಿನ ಸಿನಿಮಾ ಡೆವಿಲ್ ಸಿನಿಮಾ ಶೂಟಿಂಗ್ ವೇಳೆ ನಟ ದರ್ಶನ್ ರವರಿಗೆ ಅವರ ಕೈಗೆ ಪೆಟ್ಟಾಗಿದ್ದು, ಇಂದು ಅವರು ಆಪರೇಷನ್ ಗೆ ಒಳಗಾಗಲಿದ್ದಾರೆ.
ಈ ಮಾಹಿತಿಯನ್ನು ಸ್ವತಃ ದರ್ಶನ್ ಅವರೇ ಹೇಳಿಕೊಂಡಿದ್ದಾರೆ. ಮಂಡ್ಯದಲ್ಲಿ ನಡೆದ ಸುಮಲತಾ ಅಂಬರೀಶ್ ಅವರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು ಆಸ್ಪತ್ರೆಗೆ ಅಡ್ಮಿಟ್ ಆಗಿ ಆಪರೇಷನ್ ಗೆ ಒಳಗಾಗಲಿದ್ದೇನೆ ಎಂದಿದ್ದಾರೆ.
ಡೆವಿಲ್ ಸಿನಿಮಾದ ಸಾಹಸ ಸನ್ನಿವೇಶ ಶೂಟಿಂಗ್ ಸಮಯದಲ್ಲಿ ಅವರ ಕೈಗೆ ಏಟು ಬಿದ್ದಿದೆ ಎಂದು ಹೇಳಲಾಗುತ್ತಿದ್ದು, ಕೈಗೆ ಬೆಲ್ಟ್ ಕಟ್ಟಿಕೊಂಡು ಈವರೆಗೂ ಓಡಾಡುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ಈಗ ಆಪರೇಷನ್ ಗೆ ಒಳಗಾಗಲು ಅವರು ಮುಂದಾಗಿದ್ದಾರೆ. ಬೇಗ ಗುಣಮುಖರಾಗಿ ಬನ್ನಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ